ನವದೆಹಲಿ : ಎಲ್ಲ ಸರ್ಕಾರಿ ಹಾಗೂ ಖಾಸಗಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತಿಂಗಳಿಗೆ ತಲಾ 15 ಕೆ.ಜಿ. ಆಹಾರ ಧಾನ್ಯವನ್ನು ಸಬ್ಸಿಡಿ ದರದಲ್ಲಿ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಎಸ್ಸಿ/ಎಸ್ಟಿ ವಿದ್ಯಾರ್ಥಿಗಳೂ ಸೇರಿದಂತೆ ಒಟ್ಟು 1 ಕೋಟಿ ವಿದ್ಯಾರ್ಥಿಗಳು ಈ ಯೋಜನೆಯಿಂದ ಲಾಭ ಪಡೆಯಲಿದ್ದು, ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ ₹4 ಸಾವಿರ ಕೋಟಿ ಹೊರೆ ಬೀಳಲಿದೆ.
ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ದಲಿತರು ಹಾಗೂ ಹಿಂದುಳಿದವರನ್ನು ಓಲೈಸಲು ವಿವಿಧ ರಾಜಕೀಯ ಪಕ್ಷಗಳು ಯತ್ನಿಸುತ್ತಿರುವ ಮಧ್ಯೆಯೇ ಕೇಂದ್ರ ಈ ಯೋಜನೆಯನ್ನು ಪ್ರಕಟಿಸಿದೆ.
ಸರ್ಕಾರವು ಬಿಪಿಎಲ್ ದರದಲ್ಲಿ ಧಾನ್ಯ ವಿತರಿಸಲಿದೆ. ಗೋಧಿಯನ್ನು ಕೆ.ಜಿಗೆ ₹4.15 ಹಾಗೂ ಅಕ್ಕಿಯನ್ನು ಕೆ.ಜಿಗೆ ₹5.65ಕ್ಕೆ ನೀಡಲಿದೆ ಎಂದು ಆಹಾರ ಸಚಿವ ರಾಮ್ವಿಲಾಸ್ ಪಾಸ್ವಾನ್ ಸೋಮವಾರ ತಿಳಿಸಿದರು.