ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಕನ್ನಡಿಗರು ಬಂದು ಕಣ್ಣೂರಿನಲ್ಲಿ ಇಳಿದಿರುವ ಕುರಿತು ಕೇರಳ ಸರ್ಕಾರ ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಬಳಿಕ ಕ್ವಾರಂಟೈನ್ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದ ಅಲ್ಲಿನ ಅಧಿಕಾರಿಗಳು, ನಂತರ ಖಾಲಿ ಮಾಡಿಸಿದ್ದರು. ಮಾನವೀಯ ನೆಲೆಯಲ್ಲಿ ಎಲ್ಲರನ್ನೂ ಕರೆತಂದು, ಕ್ವಾರಂಟೈನ್ ಮಾಡಲಾಗಿದೆ. ಜೂನ್ 27ರಂದು ಬಂದವರಲ್ಲಿ ಯಾರೂ ಕ್ವಾರಂಟೈನ್ ತಪ್ಪಿಸಿಕೊಂಡಿಲ್ಲ’ ಎಂದರು.