ತಾಲ್ಲೂಕಿನ ಬ್ಯಾಗಡಹಳ್ಳಿ ಗ್ರಾಮದ ಸರ್ವೆ ನಂ.38ರಲ್ಲಿನ ಅರಣ್ಯ ಪ್ರದೇಶವನ್ನು ಎಚ್ಆರ್ಪಿ ಮಂಜೂರಾತಿ ಹೆಸರಿನಲ್ಲಿ ಅಕ್ರಮವಾಗಿ ಪರಭಾರೆ ಮಾಡಿ, ಅದರಲ್ಲಿದ್ದ ಮರಗಳನ್ನು ಕಾನೂನು ಬಾಹಿರವಾಗಿ ಕಡಿಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ವಿಚಾರದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಚಿಕ್ಕಮಗಳೂರು ವಿಭಾಗೀಯ ವ್ಯವಸ್ಥಾಪಕರಾಗಿದ್ದ ಭಾಸ್ಕರ್ ರಾವ್ ಮತ್ತು ಹಾಸನ ಘಟಕದ ನೆಡುತೋಪು ಅಧೀಕ್ಷಕರಾಗಿದ್ದ ಮೊಗಣ್ಣಗೌಡ ಲೋಪ ಎಸಗಿರುವುದು ಕಂಡು ಬಂದಿದೆ.