ಇದಕ್ಕೂ ಮುನ್ನ ಮೂವರೂ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ, ಶ್ವೇತ ವಸ್ತ್ರ ಧರಿಸಿ, ಹಣೆಗೆ ತಿಲಕ ಹಚ್ಚಿಕೊಂಡು ವಿರೂಪಾಕ್ಷನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇಗುಲದ ಅರ್ಚಕರಾದ ಶೇಷುಸ್ವಾಮಿ, ಪ್ರಶಾಂತ ಪೂಜಾರ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬಿ. ಶ್ರೀನಿವಾಸ್ ಅವರಿಗೆ ವಿಗ್ರಹ, ದೀಪ ಸೇರಿದಂತೆ ಇತರೆ ವಸ್ತುಗಳನ್ನು ನೀಡಿದರು.