ಶನಿವಾರಸಂತೆ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿ ಮೇ 30 ರಂದು ನಿವೃತ್ತಿ ಹೊಂದಿದ್ದ ಎಂ.ಎಸ್.ಈರಪ್ಪ (60) ಇಲ್ಲಿಗೆಸಮೀಪದ ಮಾದೇಗೋಡು ಗ್ರಾಮದಲ್ಲಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೌಟುಂಬಿಕ ಸಮಸ್ಯೆ ಹಿನ್ನಲೆ ಈರಪ್ಪ ಕುಟುಂಬಸ್ಥರ ಎದುರೇ ಒಂಟಿ ನಳಿಕೆಯ ಬಂದೂಕು ಬಳಸಿ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ.
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಳ್ಳಲಾಗಿದೆ. ಮೃತರಿಗೆಪತ್ನಿ, ಪುತ್ರಿ, ಇಬ್ಬರು ಪುತ್ರರಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶೈಲೆಂದ್ರ, ವೃತ್ತನಿರೀಕ್ಷಕ ನಂಜುಂಡೇಗೌಡ, ಪಿಎಸ್ಐ ದೇವರಾಜ್ ಭೇಟಿ ನೀಡಿದ್ದರು.