ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕೇಶ್ವರ: ಮಾಜಿ ಸಚಿವ ಮಲ್ಲಾರಿಗೌಡ ಪಾಟೀಲ ನಿಧನ

Last Updated 31 ಡಿಸೆಂಬರ್ 2019, 18:45 IST
ಅಕ್ಷರ ಗಾತ್ರ

ಸಂಕೇಶ್ವರ: ಮಾಜಿ ಸಚಿವ ಮಲ್ಲಾರಿಗೌಡ ಶಂಕರಗೌಡ ಪಾಟೀಲ‌ ( 79) ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಪತ್ನಿ, ನಾಲ್ಕು ಪುತ್ರಿಯರು ಇದ್ದಾರೆ.

ಸಂಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ದಿ.ಎಸ್.ಬಂಗಾರಪ್ಪ ಅವರ ಸಚಿವ ಸಂಪುಟದಲ್ಲಿ ಭಾರಿ ಮತ್ತು ಮಧ್ಯಮ ನೀರಾವರಿ ಸಚಿವರಾಗಿದ್ದರು. ಹಿಡಕಲ್ ಜಲಾಶಯದ ಮೂಲಕ ಸಂಕೇಶ್ವರ, ಹುಕ್ಕೇರಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಿದ್ದರು. ಹಣಕಾಸಿನ ಅನುಮೋದನೆ ಕೊಡಿಸಿದ್ದರು.

1991ರಲ್ಲಿ ಆದ್ಯಶ್ರೀ ನಿಜಲಿಂಗೇಶ್ವರ ಶಿಕ್ಷಣ ಸಂಸ್ಥೆ ಸ್ಥಾಪಿಸಿದರು. ಶಾಲಾ, ಪದವಿ ಕಾಲೇಜು, ಹೋಮಿಯೊಪಥಿ, ಕಾನೂನು ಕಾಲೇಜು ಸ್ಥಾಪಿಸಿದರು.

ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ಸಂಕೇಶ್ವರದ ಅವರ ತೋಟದ ಮನೆಯಲ್ಲಿ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT