ಬೆಂಗಳೂರು: ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರುವುದುಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರೋದು ಸರಿಯಲ್ಲ. ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು.