ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸ್ಪೀಕರ್ ನಿರ್ಧಾರದ ವಿರುದ್ಧ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ಗೆ ಹೋಗುತ್ತಾರೆ, ನಿಜ. ಆದರೆ ರಾಜ್ಯದ ಇಂದಿನ ರಾಜಕೀಯ ಪರಿಸ್ಥಿತಿಗೆ ಕಾಂಗ್ರೆಸ್–ಜೆಡಿಎಸ್ ಮುಖಂಡರ ನಡವಳಿಕೆಗಳೇ ಕಾರಣ. ಎಲ್ಲರೂ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ, ಪ್ರಜಾಪ್ರಭುತ್ವಕ್ಕೆ ಏನೂ ಆಗಿಲ್ಲ. ಆದರೆ ಜೆಡಿಎಸ್–ಕಾಂಗ್ರೆಸ್ ನಾಯಕರ ಆಂತರಿಕ ಕಲಹದಿಂದ ಅನಿಶ್ಚಿತತೆ ಉಂಟಾಗಿದೆ’ ಎಂದು ಹೇಳಿದರು.