ಕ.ಸಾ.ಪ.ದಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿರುವ ಅನೇಕ ಅಧ್ಯಕ್ಷರು, ಮೂರು ವರ್ಷಗಳ ಸೇವಾ ಅವಧಿಯಲ್ಲೇ ಅನೇಕ ಸಾಹಿತ್ಯ ಚಟುವಟಿಕೆಗಳ ಜೊತೆಗೆ ರಚನಾತ್ಮಕ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಸಾಹಿತ್ಯ ಪರಿಷತ್ತನ್ನು ಜನಪ್ರಿಯಗೊಳಿಸಿದ್ದಾರೆ ಮತ್ತು ಅಭಿವೃದ್ಧಿಪಡಿಸಿದ್ದಾರೆ. ಭವ್ಯ ಇತಿಹಾಸ ಹೊಂದಿರುವ ಇಂತಹ ಸಂಸ್ಥೆಯ ಬೈಲಾ ತಿದ್ದುಪಡಿ ಮಾಡಲು ಹೊರಟಿರುವ ಕ್ರಮ ಅವೈಜ್ಞಾನಿಕವಾಗಿದೆ. ಅವಧಿ ವಿಸ್ತರಿಸುವುದರ ಹಿಂದೆ ಪರಿಷತ್ತಿನ ಏಳಿಗೆಗಿಂತ ಸ್ವತಃ ಲಾಭ ಮಾಡಿಕೊಳ್ಳುವ ಉದ್ದೇಶ ಇದ್ದಂತಿದೆ. ಉದ್ದೇಶಿತ ತಿದ್ದುಪಡಿಯು ಹಾಲಿ ಕಾರ್ಯಕಾರಿ ಸಮಿತಿಯ ಆಡಳಿತಾವಧಿಗೂ ಅನ್ವಯವಾಗುವಂತೆ ಮಾಡಿಕೊಳ್ಳ ಹೊರಟಿರುವುದರಿಂದ ಇದು
ಸ್ಪಷ್ಟವಾಗುತ್ತದೆ. ಪರಿಷತ್ತಿಗೆ ಇನ್ನೂ ಹೆಚ್ಚು ಸೇವೆ ಸಲ್ಲಿಸಬೇಕೆಂಬ ಅಭಿಲಾಷೆ ಹೊಂದಿದ್ದರೆ, ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಿ, ಗೆದ್ದು ಅಧ್ಯಕ್ಷರಾಗಿ ಸೇವೆ ಸಲ್ಲಿಸಬಹುದಲ್ಲವೇ?