ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕರ್ತವ್ಯ ಲೋಪ: ಮೂವರ ಅಮಾನತು

Last Updated 1 ಏಪ್ರಿಲ್ 2019, 19:11 IST
ಅಕ್ಷರ ಗಾತ್ರ

ಶಿಕಾರಿಪುರ: ಚುನಾವಣಾ ಕರ್ತವ್ಯ ಲೋಪದ ಆಧಾರದ ಮೇಲೆ ತಾಲ್ಲೂಕಿನ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.

ಖವಾಸಪುರ ಗ್ರಾಮದ ಚೆಕ್ ಪೋಸ್ಟ್‌ನಲ್ಲಿ ಭಾನುವಾರ ರಾತ್ರಿ ವಾಹನಗಳ ತಪಾಸಣೆ ಮಾಡದೇ ನಿದ್ರೆ ಮಾಡುತ್ತಿದ್ದ ಆರೋಪದ ಮೇಲೆ ಅಧಿಕಾರಿಗಳಾದ ಶಿಕಾರಿಪುರ ಸರ್ಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜು ಉಪನ್ಯಾಸಕ ಬಿ.ವಿ. ಅ‌ಶೋಕ ರಾಜ, ತಾಲ್ಲೂಕಿನ ಮುದ್ದನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಿ.ಸಿ.ಮಂಜಪ್ಪ ಹಾಗೂ ಶಿಕ್ಷಣ ಇಲಾಖೆ ಸಿಆರ್ ಪಿ ಡಿ.ಬಿ. ಚನ್ನೇಶ್ ಅವರನ್ನು ಅಮಾನತು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT