ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ಸ್ಪೀಕರ್ ತಡೆಯಾಜ್ಞೆ 

Last Updated 28 ಮೇ 2020, 6:25 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಡೆಯಾಜ್ಞೆ ನೀಡಿದ್ದು, ಯಾವುದೇ ಅಧ್ಯಯನ ಪ್ರವಾಸ ಕೈಗೊಳ್ಳದಿರಲು ಆದೇಶ ಹೊರಡಿಸಿದ್ದಾರೆ.

ಸ್ಪೀಕರ್ ಆದೇಶಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಟ್ವಿಟರ್‌ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭ್ರಷ್ಠಾಚಾರ ಕುರಿತು ತನಿಖೆ ಮಾಡಲು ಸ್ಪೀಕರ್ ನೀಡಿರುವ ತಡೆ ಸಂವಿಧಾನ ಮತ್ತು ಕಾನೂನಾತ್ಮಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತದೆ. ವಿಧಾನಮಂಡಲದ ಸಮಿತಿಗಳ ಅಧಿಕಾರ ಮೊಟಕುಮಾಡುವ ಪ್ರಯತ್ನ ತಕ್ಷಣ ಕೈಬಿಡಿ ಎಂದು ಮನವಿ ಮಾಡಿದ್ದಾರೆ.

ಲಘು ಪ್ರಕಟಣೆ 104ನ್ನು ಹಿಂಪಡೆದು ಭ್ರಷ್ಠಾಚಾರ ಪೋಷಿಸುವ ಕ್ರಮವಾಗಿರುವ ಈ ಆದೇಶವನ್ನು ಹಿಂತೆಗೆದುಕೊಳ್ಳಲು ಎಚ್.ಕೆ.ಪಾಟೀಲ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT