ಬೆಂಗಳೂರು: ಸಾರ್ವಜನಿಕ ಲೆಕ್ಕಪತ್ರ ಸಮಿತಿ ತನಿಖೆ, ಸ್ಥಳಪರಿಶೀಲನೆಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಡೆಯಾಜ್ಞೆ ನೀಡಿದ್ದು, ಯಾವುದೇ ಅಧ್ಯಯನ ಪ್ರವಾಸ ಕೈಗೊಳ್ಳದಿರಲು ಆದೇಶ ಹೊರಡಿಸಿದ್ದಾರೆ.
ಸ್ಪೀಕರ್ ಆದೇಶಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಟ್ವಿಟರ್ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭ್ರಷ್ಠಾಚಾರ ಕುರಿತು ತನಿಖೆ ಮಾಡಲು ಸ್ಪೀಕರ್ ನೀಡಿರುವ ತಡೆ ಸಂವಿಧಾನ ಮತ್ತು ಕಾನೂನಾತ್ಮಕ ವ್ಯವಸ್ಥೆಯನ್ನು ಬುಡಮೇಲು ಮಾಡುತ್ತದೆ. ವಿಧಾನಮಂಡಲದ ಸಮಿತಿಗಳ ಅಧಿಕಾರ ಮೊಟಕುಮಾಡುವ ಪ್ರಯತ್ನ ತಕ್ಷಣ ಕೈಬಿಡಿ ಎಂದು ಮನವಿ ಮಾಡಿದ್ದಾರೆ.
ಲಘು ಪ್ರಕಟಣೆ 104ನ್ನು ಹಿಂಪಡೆದು ಭ್ರಷ್ಠಾಚಾರ ಪೋಷಿಸುವ ಕ್ರಮವಾಗಿರುವ ಈ ಆದೇಶವನ್ನು ಹಿಂತೆಗೆದುಕೊಳ್ಳಲು ಎಚ್.ಕೆ.ಪಾಟೀಲ ಆಗ್ರಹಿಸಿದ್ದಾರೆ.
ಶಾಸನ ಸಭೆಯ ಸಮಿತಿಗಳ ಸಂವಿಧಾನಾತ್ಮಕ ಬಾಧ್ಯತೆಯನ್ನು ಪ್ರಶ್ನಿಸುವ ವಿಧಾನ ಮಂಡಲದ ಸಮಿತಿಗಳ ಅಧಿಕಾರ ಮೊಟಕುಗೊಳಿಸುವ ಲಘು ಪ್ರಕಟಣೆ 104ನ್ನು ಹಿಂಪಡೆದು ಭ್ರಷ್ಠಾಚಾರವನ್ನು ತನಿಖೆ ಮಾಡುವ ನಿರ್ಭಯ ನಿರ್ಧಾಕ್ಷಿಣ್ಯ ವಾತಾವರಣ ಸೃಷ್ಠಿಸಿ. pic.twitter.com/TGjHRiig3Y