<p><strong>ಬೆಂಗಳೂರು:</strong>‘ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೇಂದ್ರ ಸರ್ಕಾರ ಮೀಸಲಾತಿ ಸೇರಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ತಳೆಯುತ್ತಿದೆ. ಚುನಾವಣೆಯ ಬಳಿಕ ಈ ನಿರ್ಧಾರಗಳಿಗೆ ಯಾವುದೇ ಮೌಲ್ಯ ಇರುವುದಿಲ್ಲ’ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.</p>.<p>ವಿಧಿ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯವು ನಗರದಲ್ಲಿ ಗುರುವಾರ ಆಯೋಜಿಸಿದ್ದ‘ರಾಷ್ಟ್ರೀಯ ವಿಚಾರ ಸಂಕಿರಣ’ ಉದ್ಘಾಟಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳರ ‘ದೇವೇಗೌಡ ಭಸ್ಮಾಸುರ ಇದ್ದಂತೆ’ ಎಂಬ ಹೇಳಿಕೆಗೆ, ‘ಬಸನಗೌಡರು ಈ ಹಿಂದೆಬಿಜೆಪಿ ಬಿಟ್ಟು ಜೆಡಿಎಸ್ಗೆ ಬಂದಿದ್ದಾಗ ಬಿಜೆಪಿ ಪಕ್ಷದ ನಾಯಕರ ಬಗ್ಗೆ ತುಂಬಾನೇ ಮಾತನಾಡಿದ್ದರು. ಈಗ ಬಿಜೆಪಿಯಲ್ಲಿದ್ದುಕೊಂಡು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಾನೇನು ಮಾತನಾಡಲಿ’ ಎಂದು ಪ್ರತಿಕ್ರಿಯಿಸಿದರು.</p>.<p>ಬೆಂಗಳೂರಿನಲ್ಲಿ ನಿರ್ಮಿಸಲು ಯೋಜಿಸಿರುವ ಉಕ್ಕಿನ ಸೇತುವೆ ಬಗ್ಗೆ ಕೇಳಿದಾಗ, ‘ಜನರಿಗೆ ಅನುಕೂಲವಾಗುವ ಯೋಜನೆಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ವಿಷಯದಲ್ಲಿ ನನ್ನ ಮೇಲೆ ಯಾವುದೇ ಒತ್ತಡ ಇಲ್ಲ’ ಎಂದು ತಿಳಿಸಿದರು.</p>.<p>‘ಯಾವುದೇ ಅಡಚಣೆ ಇಲ್ಲದೆ ನಮ್ಮ ಸರ್ಕಾರ ಸುಗಮವಾಗಿ ಐದು ವರ್ಷಗಳನ್ನು ಪೂರೈಸಲಿದೆ. ಅದರಲ್ಲಿ ಯಾರಿಗೂ ಯಾವುದೇ ಅಪನಂಬಿಕೆ ಬೇಡ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಲೋಕಸಭಾ ಚುನಾವಣಾ ದೃಷ್ಟಿಯಿಂದ ಕೇಂದ್ರ ಸರ್ಕಾರ ಮೀಸಲಾತಿ ಸೇರಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ತಳೆಯುತ್ತಿದೆ. ಚುನಾವಣೆಯ ಬಳಿಕ ಈ ನಿರ್ಧಾರಗಳಿಗೆ ಯಾವುದೇ ಮೌಲ್ಯ ಇರುವುದಿಲ್ಲ’ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.</p>.<p>ವಿಧಿ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯವು ನಗರದಲ್ಲಿ ಗುರುವಾರ ಆಯೋಜಿಸಿದ್ದ‘ರಾಷ್ಟ್ರೀಯ ವಿಚಾರ ಸಂಕಿರಣ’ ಉದ್ಘಾಟಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.</p>.<p>ಶಾಸಕ ಬಸನಗೌಡ ಪಾಟೀಲ ಯತ್ನಾಳರ ‘ದೇವೇಗೌಡ ಭಸ್ಮಾಸುರ ಇದ್ದಂತೆ’ ಎಂಬ ಹೇಳಿಕೆಗೆ, ‘ಬಸನಗೌಡರು ಈ ಹಿಂದೆಬಿಜೆಪಿ ಬಿಟ್ಟು ಜೆಡಿಎಸ್ಗೆ ಬಂದಿದ್ದಾಗ ಬಿಜೆಪಿ ಪಕ್ಷದ ನಾಯಕರ ಬಗ್ಗೆ ತುಂಬಾನೇ ಮಾತನಾಡಿದ್ದರು. ಈಗ ಬಿಜೆಪಿಯಲ್ಲಿದ್ದುಕೊಂಡು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಾನೇನು ಮಾತನಾಡಲಿ’ ಎಂದು ಪ್ರತಿಕ್ರಿಯಿಸಿದರು.</p>.<p>ಬೆಂಗಳೂರಿನಲ್ಲಿ ನಿರ್ಮಿಸಲು ಯೋಜಿಸಿರುವ ಉಕ್ಕಿನ ಸೇತುವೆ ಬಗ್ಗೆ ಕೇಳಿದಾಗ, ‘ಜನರಿಗೆ ಅನುಕೂಲವಾಗುವ ಯೋಜನೆಗಳಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ವಿಷಯದಲ್ಲಿ ನನ್ನ ಮೇಲೆ ಯಾವುದೇ ಒತ್ತಡ ಇಲ್ಲ’ ಎಂದು ತಿಳಿಸಿದರು.</p>.<p>‘ಯಾವುದೇ ಅಡಚಣೆ ಇಲ್ಲದೆ ನಮ್ಮ ಸರ್ಕಾರ ಸುಗಮವಾಗಿ ಐದು ವರ್ಷಗಳನ್ನು ಪೂರೈಸಲಿದೆ. ಅದರಲ್ಲಿ ಯಾರಿಗೂ ಯಾವುದೇ ಅಪನಂಬಿಕೆ ಬೇಡ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>