ಪಕ್ಷಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಆಯ್ಕೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ರಾಜ್ಯಸಭೆ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಹಲವು ಹಿರಿಯ ನಾಯಕರು ಅವರಿಗೆ ಸೂಚಕರಾಗಿ ಸಹಿ ಹಾಕಿದ್ದೇವೆ. ಇದು ಸೋನಿಯಾ ಗಾಂಧಿಯವರ ನಿರ್ಧಾರ. ಖರ್ಗೆ ಅವರು ಪಕ್ಷಕ್ಕಾಗಿ ಸಲ್ಲಿಸಿರುವ ಸೇವೆ ಪರಿಗಣಿಸಿ ಆಯ್ಕೆ ಮಾಡಿದ್ದಾರೆ’ ಎಂದರು.