<p><strong>ಮಡಿಕೇರಿ:</strong> ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ, ಪ್ರತಿಭಟನೆ ನಡೆಯುವ ಸಾಧ್ಯತೆಯಿದ್ದು ಸೂಕ್ಷ್ಮ ಪ್ರದೇಶವಾದ ಕೊಡಗಿನಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ.</p>.<p>ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಸಿದ್ದಾಪುರ, ನೆಲ್ಯಹುದಿಕೇರಿ, ಕುಶಾಲನಗರದ ಆಯಾಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.</p>.<p>ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತ, ಚೌಕಿ, ಮಹಾದೇವಪೇಟೆ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.</p>.<p>ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಘಟನೆ ಖಂಡಿಸಿ ಸಿದ್ದಾಪುರ, ನೆಲ್ಯಹುದಿಕೇರಿ, ಸುಂಟಿಕೊಪ್ಪ, ವಿರಾಜಪೇಟೆಯಲ್ಲಿ ಮುಸ್ಲಿಂ ವರ್ತಕರು ಶುಕ್ರವಾರ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಈ ಪಟ್ಟಣಗಳಲ್ಲಿ ಶನಿವಾರ ವಹಿವಾಟು ಸಹಜವಾಗಿತ್ತು. ಆದರೆ, ಮಡಿಕೇರಿಯಲ್ಲಿ ಕೆಲವು ಮುಸ್ಲಿಂ ವರ್ತಕರು 2ನೇ ದಿನವಾದ ಶನಿವಾರವೂ ಘಟನೆ ಖಂಡಿಸಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಉಳಿದಂತೆ ಜನಜೀವನ ಹಾಗೂ ವಾಹನ ಸಂಚಾರ ಸಹಜವಾಗಿತ್ತು. ಅಂಗಡಿಗಳ ಮುಂದೆ ಘಟನೆ ಖಂಡಿಸಿ ಬಿತ್ತಿಪತ್ರ ಅಂಟಿಸಲಾಗಿತ್ತು.</p>.<p>ಕೊಡಗು– ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಪಾಜೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಇಂಟರ್ನೆಟ್ ಸೇವೆ ವ್ಯತ್ಯಯವಾಗಿದೆ.</p>.<p><strong>ಬಸ್ ಸಂಚಾರ ಆರಂಭ:</strong>ಶನಿವಾರ ಬೆಳಿಗ್ಗೆಯಿಂದ ಸುಳ್ಯ, ಸಂಪಾಜೆ ಕಡೆಯಿಂದ ಮಡಿಕೇರಿಗೆ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಗೊಂಡಿತ್ತು. ವಿವಿಧ ಕೆಲಸಗಳಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಿದ್ದವರು ಶನಿವಾರ ಬೆಳಿಗ್ಗೆ ಮಡಿಕೇರಿಗೆ ವಾಪಸ್ಸಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ, ಪ್ರತಿಭಟನೆ ನಡೆಯುವ ಸಾಧ್ಯತೆಯಿದ್ದು ಸೂಕ್ಷ್ಮ ಪ್ರದೇಶವಾದ ಕೊಡಗಿನಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ.</p>.<p>ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ, ಸಿದ್ದಾಪುರ, ನೆಲ್ಯಹುದಿಕೇರಿ, ಕುಶಾಲನಗರದ ಆಯಾಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.</p>.<p>ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತ, ಚೌಕಿ, ಮಹಾದೇವಪೇಟೆ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರು ಬೀಡುಬಿಟ್ಟಿದ್ದಾರೆ.</p>.<p>ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಘಟನೆ ಖಂಡಿಸಿ ಸಿದ್ದಾಪುರ, ನೆಲ್ಯಹುದಿಕೇರಿ, ಸುಂಟಿಕೊಪ್ಪ, ವಿರಾಜಪೇಟೆಯಲ್ಲಿ ಮುಸ್ಲಿಂ ವರ್ತಕರು ಶುಕ್ರವಾರ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಈ ಪಟ್ಟಣಗಳಲ್ಲಿ ಶನಿವಾರ ವಹಿವಾಟು ಸಹಜವಾಗಿತ್ತು. ಆದರೆ, ಮಡಿಕೇರಿಯಲ್ಲಿ ಕೆಲವು ಮುಸ್ಲಿಂ ವರ್ತಕರು 2ನೇ ದಿನವಾದ ಶನಿವಾರವೂ ಘಟನೆ ಖಂಡಿಸಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಉಳಿದಂತೆ ಜನಜೀವನ ಹಾಗೂ ವಾಹನ ಸಂಚಾರ ಸಹಜವಾಗಿತ್ತು. ಅಂಗಡಿಗಳ ಮುಂದೆ ಘಟನೆ ಖಂಡಿಸಿ ಬಿತ್ತಿಪತ್ರ ಅಂಟಿಸಲಾಗಿತ್ತು.</p>.<p>ಕೊಡಗು– ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಸಂಪಾಜೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಇಂಟರ್ನೆಟ್ ಸೇವೆ ವ್ಯತ್ಯಯವಾಗಿದೆ.</p>.<p><strong>ಬಸ್ ಸಂಚಾರ ಆರಂಭ:</strong>ಶನಿವಾರ ಬೆಳಿಗ್ಗೆಯಿಂದ ಸುಳ್ಯ, ಸಂಪಾಜೆ ಕಡೆಯಿಂದ ಮಡಿಕೇರಿಗೆ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭಗೊಂಡಿತ್ತು. ವಿವಿಧ ಕೆಲಸಗಳಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಿದ್ದವರು ಶನಿವಾರ ಬೆಳಿಗ್ಗೆ ಮಡಿಕೇರಿಗೆ ವಾಪಸ್ಸಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>