ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಘಟನೆ ಖಂಡಿಸಿ ಸಿದ್ದಾಪುರ, ನೆಲ್ಯಹುದಿಕೇರಿ, ಸುಂಟಿಕೊಪ್ಪ, ವಿರಾಜಪೇಟೆಯಲ್ಲಿ ಮುಸ್ಲಿಂ ವರ್ತಕರು ಶುಕ್ರವಾರ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಈ ಪಟ್ಟಣಗಳಲ್ಲಿ ಶನಿವಾರ ವಹಿವಾಟು ಸಹಜವಾಗಿತ್ತು. ಆದರೆ, ಮಡಿಕೇರಿಯಲ್ಲಿ ಕೆಲವು ಮುಸ್ಲಿಂ ವರ್ತಕರು 2ನೇ ದಿನವಾದ ಶನಿವಾರವೂ ಘಟನೆ ಖಂಡಿಸಿ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದರು. ಉಳಿದಂತೆ ಜನಜೀವನ ಹಾಗೂ ವಾಹನ ಸಂಚಾರ ಸಹಜವಾಗಿತ್ತು. ಅಂಗಡಿಗಳ ಮುಂದೆ ಘಟನೆ ಖಂಡಿಸಿ ಬಿತ್ತಿಪತ್ರ ಅಂಟಿಸಲಾಗಿತ್ತು.