ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿಮುಂಜಾಗ್ರತಾ ಕ್ರಮ ಕೈಗೊಳ್ಳಲು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ₹86.25 ಕೋಟಿ ಅನುದಾನವನ್ನು ಸರ್ಕಾರ ಬುಧವಾರಬಿಡುಗಡೆ ಮಾಡಿದೆ.
ಕಂದಾಯ ಇಲಾಖೆಯು ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಈ ಹಣವನ್ನು ಬಿಡುಗಡೆ ಮಾಡಿದೆ. ಕೇಂದ್ರ ಗೃಹ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿಕೂಡಲೆ ಎಲ್ಲಾ ಜಿಲ್ಲೆಗಳಿಗೂ ಅಗತ್ಯವಿರುವ ಹಣಕಾಸು ನೆರವು ನೀಡಬೇಕೆಂದು ನಿರ್ದೇಶಿಸಿತ್ತು.ಈ ಆದೇಶದ ಅನ್ವಯ ಕಂದಾಯ ಇಲಾಖೆಯ ಜಂಟಿ ಕಾರ್ಯದರ್ಶಿ ಈ ಹಣ ಬಿಡುಗಡೆ ಮಾಡಿದ್ದಾರೆ.
ಈ ಹಣವನ್ನು ಜನರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ, ಆಹಾರ, ಬಟ್ಟೆಗಳಿಗೆ, ಗಂಟಲು ದ್ರವ ಸಂಗ್ರಹಣೆ, ಲ್ಯಾಬ್ ಸಲಕರಣೆಗಳ ಖರೀದಿಗೆಖರ್ಚು ಮಾಡುವಂತೆ ಷರತ್ತು ವಿಧಿಸಲಾಗಿದೆ.ಈ ಅನುದಾನವನ್ನು ಬೇರೆ ಯಾವ ಉದ್ದೇಶಕ್ಕಾಗಿಯೂ ಬಳಸಕೂಡದು, ಬಳಸಿದ ಹಣಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ನೇರವಾಗಿ ಜಿಲ್ಲಾಧಿಕಾರಿಯನ್ನೇಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆಯಾ ಜಿಲ್ಲೆಗಳು ಹಾಗೂ ಹಣದ ವಿವರ ಕೆಳಕಂಡಂತಿದೆ.