ಸಿದ್ಧಲಿಂಗ ಸ್ವಾಮೀಜಿ ಅವರು, ತ್ರಿವಿದ ದಾಸೋಹಿ ಎಂದೇ ಹೆಸರಾಗಿದ್ದರು. ಮಠದಲ್ಲಿ ಅನ್ನ ದಾಸೋಹ, ಅಕ್ಷರ ದಾಸೋಹ, ಪುಸ್ತಕ ದಾಸೋಹ, ಸಂಸ್ಕೃತಿ ದಾಸೋಹ ಪರಂಪರೆಯನ್ನು ಹುಟ್ಟುಹಾಕಿದ್ದರು. ಭಕ್ತರನ್ನು ಮತೀಯ ಚೌಕಟ್ಟಿನಿಂದ ಬಿಡಿಸಿ, ಮಾನವೀಯತೆಯ ವಿಸ್ತಾರಕ್ಕೆ ಅಣಿಗೊಳಿಸಿದ್ದರಿಂದ ಮಠವು ಸರ್ವಮತ ಬಾಂಧವರ ಪ್ರೀತಿಯ ಪೀಠವಾಗಿತ್ತು. ಇದಕ್ಕಾಗಿಯೇ ಅವರು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಂದ ‘ರಾಷ್ಟ್ರೀಯ ಕೋಮು ಸೌಹಾರ್ದತಾ ಪ್ರಶಸ್ತಿ’ ಪಡೆದಿದ್ದರು.