‘ಧರಣಿ ನಿರತ ಶಾಸಕರಿಗೆ ನಿನ್ನೆ ರಾತ್ರಿ ಹೀಗಾಗಿ ಭೋಜನದ ವ್ಯವಸ್ಥೆ, ಮಲಗಲು ಬೆಡ್ಶೀಟ್, ತಲೆದಿಂಬು ಕೊಟ್ಟಿದ್ದೆವು. ಇವತ್ತು ಬೆಳಿಗ್ಗೆ ಅವರಿಗೆ ಯಾವುದೂ ತೊಂದರೆ ಆಗಬಾರದು ಅಂತ ವಿಚಾರಿಸೋಕೆ ಬಂದಿದ್ದೆ. ಅವರಿಗೆ ಉಪಾಹಾರದ ವ್ಯವಸ್ಥೆಯನ್ನೂ ಮಾಡಿದ್ದೆ. ನಾನೂ ಉಪಾಹಾರ ತಗೊಂಡು ಬಂದಿದ್ದೇನೆ. ಎಲ್ಲರೂ ಆರಾಮವಾಗಿ ಇದ್ದಾರೆ. ಅವರ ವೈದ್ಯರನ್ನೂ ಇಲ್ಲೇ ಇಟ್ಟಿದ್ವಿ. ಯಾರಿಗಾದರೂ ಆರೋಗ್ಯದ ಏರುಪೇರಾದ್ರೆ ವೈದ್ಯರು ಬೇಕಾಗುತ್ತಾರೆ ಅಂತ ವೈದ್ಯರ ತಂಡವನ್ನೇ ಇರಿಸಿದ್ದೇವೆ. ಎಲ್ಲರೂ ಆರೋಗ್ಯವಾಗಿದ್ದಾರೆ.