ಜಮಖಂಡಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಮ್ ಗುರುವಾರ ಇಲ್ಲಿ ತಿಳಿಸಿದರು.
‘ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ಪರಮೇಶ್ವರ್ ಭರವಸೆ ನೀಡಿದ್ದರು. ರಾಮದಾಸ್ ಅವರು ಪ್ರಚಾರ ಸಂದರ್ಭದಲ್ಲಿ ಆರತಿ ತಟ್ಟೆಗೆ ₹2000 ಹಾಕಿದ್ದರು’ ಎಂದು ವಿವರಿಸಿದರು.