ಮೂರು ತಾಸು ನಡೆದ ವಿಚಾರಣೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಪರಮೇಶ್ವರ, ‘ಇತ್ತೀಚೆಗೆ ಅಧಿಕಾರಿಗಳು ನನ್ನ ಮನೆ ಮತ್ತು ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದರು. ನನ್ನ ಕಾಲೇಜು ಬಗ್ಗೆ ದಾಖಲೆಗಳನ್ನು ಕೇಳಿದ್ದರು. ಸಂಬಂಧಿಸಿದ ದಾಖಲೆಗಳನ್ನು ನೀಡಲು ಬಂದಿದ್ದೆ. ವಿಚಾರಣೆ ವೇಳೆ ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೆ ವಿಚಾರಣೆಗೆ ಬರಬೇಕೆಂದು ಸೂಚಿಸಿಲ್ಲ’ ಎಂದರು.