ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಸಿಎಂಪಿಗೆ ಒತ್ತು: ಡಿಸಿಎಂ

Last Updated 14 ಜನವರಿ 2019, 19:41 IST
ಅಕ್ಷರ ಗಾತ್ರ

ಬೆಂಗಳೂರು: ಸಮ್ಮಿಶ್ರ ಸರ್ಕಾರದಮುಂದಿನ ಬಜೆಟ್‌ನಲ್ಲಿ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ಕ್ಕೆ (ಸಿಎಂಪಿ) ಒತ್ತು ನೀಡುವ ಅಗತ್ಯದ ಬಗ್ಗೆ ಕಾಂಗ್ರೆಸ್‌ ಸಚಿವರ ಸಭೆಯಲ್ಲಿ ಚರ್ಚಿಸಲಾಗಿದೆ.‌

ಪಕ್ಷದ ಸಚಿವರಿಗೆ ಅಶೋಕ ಹೋಟೆಲ್‌ನಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಸೋಮವಾರ ಉಪಾಹಾರ ಕೂಟ ಆಯೋಜಿಸಿದ್ದರು. 2019–20ರ ಬಜೆಟ್‌ನಲ್ಲಿ ಯಾವೆಲ್ಲ ಅಂಶಗಳನ್ನು ಸೇರಿಸಬೇಕು ಎಂಬ ಬಗ್ಗೆ ಈ ವೇಳೆ ಚರ್ಚೆ ನಡೆದಿದೆ.

‘ಪ್ರಜಾವಾಣಿ’ ಜೊತೆ ಮಾತನಾಡಿದ ಪರಮೇಶ್ವರ, ‘ಎರಡೂ (ಜೆಡಿಎಸ್‌–ಕಾಂಗ್ರೆಸ್‌) ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ಬೇರೆಬೇರೆ ಭರವಸೆಗಳನ್ನು ನೀಡಿ ಚುನಾವಣೆ ಎದುರಿಸಿವೆ. ಕೃಷಿ, ಶಿಕ್ಷಣ, ವೈದ್ಯಕೀಯ ಹೀಗೆ ವಿವಿಧ ವಲಯಗಳಿಗೆ ಬಜೆಟ್‌ನಲ್ಲಿ ಹಣ ಮೀಸಲಿಡುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದರು.

‘ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು ಶಾಸಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಪರಮೇಶ್ವರ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT