ಈ ಯೋಜನೆಯನ್ನು ಕಾರ್ಯಗತಗೊಳಿಸುವುದು ಕಷ್ಟಕರ ಎಂಬುದು ಗೊತ್ತಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಿ, ಪ್ರವಾಸಿಗರನ್ನು ಆಕರ್ಷಿಸುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ಆಹಾರ, ಶಿಕ್ಷಣ, ನೈರ್ಮಲ್ಯ, ಮೂಲ ಸೌಕರ್ಯಕ್ಕೆ ಆದ್ಯತೆ ನೀಡುತ್ತದೆ. ಆದರೆ ಪ್ರವಾಸೋದ್ಯಮ ಇಲಾಖೆಯು ಹೊಸ ಆಲೋಚನೆಗಳ ಮೂಲಕ ಆದಾಯ ಹೆಚ್ಚಿಸುವ ಪ್ರಯತ್ನ ನಡೆಸಿದೆ ಎಂದು ಸ್ಪಷ್ಟಪಡಿಸಿದರು.