<p><strong>ಮಂಡ್ಯ:</strong> ‘ಶಾಸಕ ಗಣೇಶ್ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರ ಬಂಧಿಸಲಾಗುವುದು. ಐಪಿಸಿ ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಇಲ್ಲಿ ಶನಿವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಶಾಸಕ ಗಣೇಶ್ ಬಂಧನಕ್ಕೆ ರಾಜ್ಯದ ಪೊಲೀಸ್ ಪಡೆ ಬೆನ್ನು ಹತ್ತಿದೆ. ಮುಂಬೈನಲ್ಲಿ ಹಿಡಿಯಲು ಪ್ರಯತ್ನ ಮಾಡಲಾಗಿತ್ತು. ಆಗ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಯಾರ ಕೈಗೂ ಸಿಗದೆ ಪರಾರಿಯಾಗಿದ್ದಾರೆ. ಗೋವಾದಲ್ಲಿ ಇರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಬಂಧಿಸಲಿದ್ದಾರೆ. ಈ ಕುರಿತು ರಾಮನಗರ ತನಿಖಾಧಿಕಾರಿ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದೇನೆ' ಎಂದರು.</p>.<p><strong>ಉಕ್ಕಿನ ಸೇತುವೆ:</strong> ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ವಿವಿಧ ದೇಶಗಳ ಉಕ್ಕಿನ ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದು, ತಜ್ಞರಿಂದ ತಾಂತ್ರಿಕ ಸಲಹೆ ಮೇರೆಗೆ ಸೇತುವೆ ನಿರ್ಮಾಣಕ್ಕೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಶಾಸಕ ಗಣೇಶ್ ಬಂಧನಕ್ಕೆ ಬಲೆ ಬೀಸಿದ್ದು, ಶೀಘ್ರ ಬಂಧಿಸಲಾಗುವುದು. ಐಪಿಸಿ ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಇಲ್ಲಿ ಶನಿವಾರ ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಶಾಸಕ ಗಣೇಶ್ ಬಂಧನಕ್ಕೆ ರಾಜ್ಯದ ಪೊಲೀಸ್ ಪಡೆ ಬೆನ್ನು ಹತ್ತಿದೆ. ಮುಂಬೈನಲ್ಲಿ ಹಿಡಿಯಲು ಪ್ರಯತ್ನ ಮಾಡಲಾಗಿತ್ತು. ಆಗ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಯಾರ ಕೈಗೂ ಸಿಗದೆ ಪರಾರಿಯಾಗಿದ್ದಾರೆ. ಗೋವಾದಲ್ಲಿ ಇರುವ ಮಾಹಿತಿ ಸಿಕ್ಕಿದ್ದು, ಶೀಘ್ರ ಬಂಧಿಸಲಿದ್ದಾರೆ. ಈ ಕುರಿತು ರಾಮನಗರ ತನಿಖಾಧಿಕಾರಿ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದೇನೆ' ಎಂದರು.</p>.<p><strong>ಉಕ್ಕಿನ ಸೇತುವೆ:</strong> ಬೆಂಗಳೂರಿನಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಉಕ್ಕಿನ ಸೇತುವೆ ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ. ವಿವಿಧ ದೇಶಗಳ ಉಕ್ಕಿನ ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದು, ತಜ್ಞರಿಂದ ತಾಂತ್ರಿಕ ಸಲಹೆ ಮೇರೆಗೆ ಸೇತುವೆ ನಿರ್ಮಾಣಕ್ಕೆ ನಿರ್ಧರಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>