<p><strong>ರಾಮನಗರ:</strong> ಶಾಸಕ ಆನಂದ ಸಿಂಗ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.</p>.<p>ಇಲ್ಲಿನ ಸಿಜೆಎಂ ನ್ಯಾಯಾಲಯ ಗುರುವಾರ ಆರೋಪಿಯನ್ನು ಮಾ.6ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಆದೇಶಿಸಿತು. ಮಧ್ಯಾಹ್ನ 4ಗಂಟೆ ಸುಮಾರಿಗೆ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ತನಗೆ ಹರ್ನಿಯ ಸಮಸ್ಯೆ ಇರುವುದಾಗಿ ಗಣೇಶ ನ್ಯಾಯಾಧೀಶರಿಗೆ ತಿಳಿಸಿದರು.</p>.<p>‘ಆರೋಪಿಗೆ 2016ರಿಂದಲೇ ಉಸಿರಾಟದ ಸಮಸ್ಯೆ ಇದೆ. ಹೀಗಾಗಿ ತುರ್ತು ಚಿಕಿತ್ಸೆ ಸೌಲಭ್ಯ ಇರುವ ಜೈಲಿಗೆ ಅವರನ್ನು ಒಪ್ಪಿಸಬೇಕು’ ಎಂದು ಗಣೇಶ ಪರ ವಕೀಲ ಡೆರಿಕ್ ಅನಿಲ್ ಮನವಿ ಮಾಡಿದರು.</p>.<p>‘ಗಣೇಶ ಅವರಕಂಪ್ಲಿ ಕ್ಷೇತ್ರದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಅವರನ್ನು ಕಾಣಲು ಕ್ಷೇತ್ರದ ಮತದಾರರು, ಸರ್ಕಾರಿ ಅಧಿಕಾರಿಗಳೂ ಬರುತ್ತಿರುತ್ತಾರೆ. ಎಲ್ಲರ ಓಡಾಟಕ್ಕೆ ಅನುಕೂಲ ಆಗುವಂತೆ ಪರಪ್ಪನ ಅಗ್ರಹಾರ ಇಲ್ಲವೇ ಸೂಕ್ತ ಬಂಧಿಖಾನೆಯಲ್ಲಿ ವ್ಯವಸ್ಥೆ ಮಾಡಿಕೊಡಬೇಕು’ ಎಂದು ವಕೀಲ ಅನಿಲ್ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಶಾಸಕ ಆನಂದ ಸಿಂಗ್ ಮೇಲಿನ ಹಲ್ಲೆ ಪ್ರಕರಣದ ಆರೋಪಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.</p>.<p>ಇಲ್ಲಿನ ಸಿಜೆಎಂ ನ್ಯಾಯಾಲಯ ಗುರುವಾರ ಆರೋಪಿಯನ್ನು ಮಾ.6ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಆದೇಶಿಸಿತು. ಮಧ್ಯಾಹ್ನ 4ಗಂಟೆ ಸುಮಾರಿಗೆ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ತನಗೆ ಹರ್ನಿಯ ಸಮಸ್ಯೆ ಇರುವುದಾಗಿ ಗಣೇಶ ನ್ಯಾಯಾಧೀಶರಿಗೆ ತಿಳಿಸಿದರು.</p>.<p>‘ಆರೋಪಿಗೆ 2016ರಿಂದಲೇ ಉಸಿರಾಟದ ಸಮಸ್ಯೆ ಇದೆ. ಹೀಗಾಗಿ ತುರ್ತು ಚಿಕಿತ್ಸೆ ಸೌಲಭ್ಯ ಇರುವ ಜೈಲಿಗೆ ಅವರನ್ನು ಒಪ್ಪಿಸಬೇಕು’ ಎಂದು ಗಣೇಶ ಪರ ವಕೀಲ ಡೆರಿಕ್ ಅನಿಲ್ ಮನವಿ ಮಾಡಿದರು.</p>.<p>‘ಗಣೇಶ ಅವರಕಂಪ್ಲಿ ಕ್ಷೇತ್ರದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಅವರನ್ನು ಕಾಣಲು ಕ್ಷೇತ್ರದ ಮತದಾರರು, ಸರ್ಕಾರಿ ಅಧಿಕಾರಿಗಳೂ ಬರುತ್ತಿರುತ್ತಾರೆ. ಎಲ್ಲರ ಓಡಾಟಕ್ಕೆ ಅನುಕೂಲ ಆಗುವಂತೆ ಪರಪ್ಪನ ಅಗ್ರಹಾರ ಇಲ್ಲವೇ ಸೂಕ್ತ ಬಂಧಿಖಾನೆಯಲ್ಲಿ ವ್ಯವಸ್ಥೆ ಮಾಡಿಕೊಡಬೇಕು’ ಎಂದು ವಕೀಲ ಅನಿಲ್ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>