ಕೆ.ಜಿ.ಬೋಪಯ್ಯ ಮಾತನಾಡಿ, ‘ಗಂಗಾ ಕಲ್ಯಾಣ ಯೋಜನೆಯ ವಿದ್ಯುತ್ ಸಂಪರ್ಕಕ್ಕೆ ಇಲಾಖೆಯಿಂದ ₹50 ಸಾವಿರ ಮಾತ್ರ ನೀಡಲಾಗುತ್ತಿದೆ. ಇದು ಸಾಲುವುದಿಲ್ಲ. ಮಲೆನಾಡು ಭಾಗದಲ್ಲಿ ವಿದ್ಯುತ್ ಸಂಪರ್ಕದ ವೆಚ್ಚ ದುಬಾರಿಯಾಗಿದೆ’ ಎಂದರು.ಕಾರಜೋಳ, ‘ಇಲಾಖೆ ₹50 ಸಾವಿರವನ್ನು ಮಾತ್ರ ಕೊಡಲಿದೆ. ಇನ್ನೂ ಹೆಚ್ಚಾದರೆ ಇಂಧನ ಇಲಾಖೆಯಲ್ಲೇ ಇರುವ ಪರಿಶಿಷ್ಟ ಜಾತಿಯ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯ ಅನುದಾನವನ್ನು ಖರ್ಚು ಮಾಡಿ ಸಂಪರ್ಕ ನೀಡಲು ಅವಕಾಶ ಇದೆ’ ಎಂದರು.