ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಕಾಂಗ್ರೆಸ್ ಮುಖಂಡ ಮಹಾದೇವ ಭೈರಗೊಂಡನನ್ನು ಸಿಐಡಿ ಪೊಲೀಸರು ಚಡಚಣ ತಾಲ್ಲೂಕಿನ ಕೆರೂರಿನ ಆತನ ಮನೆಯಲ್ಲೇ ಗುರುವಾರ ನಸುಕಿನಲ್ಲಿ ಬಂಧಿಸಿದ್ದಾರೆ.
ಇಂಡಿ ಜೆಎಂಎಫ್ಸಿ ನ್ಯಾಯಾಧೀಶರು ಆರೋಪಿಯನ್ನು 7 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೋಪಾಲ ಹಳ್ಳೂರ ಸೇರಿ 9 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
* ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಶಂಕೆಯಿದೆ. ತನಿಖೆ ನಡೆಸುತ್ತಿದ್ದೇವೆ. ಅಗತ್ಯ ಬಿದ್ದರೇ ಮತ್ತಷ್ಟು ಜನರನ್ನು ಬಂಧಿಸಲಾಗುವುದು. –ಎಚ್.ಡಿ.ಆನಂದಕುಮಾರ್, ಸಿಐಡಿ ಎಸ್ಪಿ