<p><strong>ಬೆಂಗಳೂರು</strong>: ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತಬಪಾತಕಿರವಿ ಪೂಜಾರಿಯನ್ನು ರಾಜ್ಯದ ಹಿರಿಯ ಪೊಲೀಸ್ಅಧಿಕಾರಿಗಳ ತಂಡಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದೆ.</p>.<p>ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಪೂಜಾರಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂದೀಪ್ ಪಾಟೀಲ, ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಹಿನ್ನೆಲೆ ಬಗ್ಗೆ ಸೋಮವಾರ ಬೆಳಿಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.</p>.<p>ರಾಜ್ಯದಲ್ಲಿ 6೦ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರವಿಪೂಜಾರಿ 1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.</p>.<figcaption>ಭೂಗತ ಪಾತಕಿ ರವಿಪೂಜಾರಿ ಭಾರತದಲ್ಲಿ ಪರೋಕ್ಷವಾಗಿ ಅಪರಾಧ ಕೃತ್ಯ ನಡೆಸಿ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ</figcaption>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿತ್ತು. ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳಿವೆ.</p>.<p>ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ಭೂಗತಬಪಾತಕಿರವಿ ಪೂಜಾರಿಯನ್ನು ರಾಜ್ಯದ ಹಿರಿಯ ಪೊಲೀಸ್ಅಧಿಕಾರಿಗಳ ತಂಡಸೋಮವಾರ ನಸುಕಿನಲ್ಲಿ ನಗರಕ್ಕೆ ಕರೆದುಕೊಂಡು ಬಂದಿದೆ.</p>.<p>ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ನೇತೃತ್ವದ ತಂಡ ಪೂಜಾರಿಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂದೀಪ್ ಪಾಟೀಲ, ರವಿ ಪೂಜಾರಿ ಅಪರಾಧ ಚಟುವಟಿಕೆ, ನಗರಕ್ಕೆ ಕರೆದುಕೊಂಡ ಬಂದಿರುವ ಹಿನ್ನೆಲೆ ಬಗ್ಗೆ ಸೋಮವಾರ ಬೆಳಿಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದರು.</p>.<p>ರಾಜ್ಯದಲ್ಲಿ 6೦ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರವಿಪೂಜಾರಿ 1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.</p>.<figcaption>ಭೂಗತ ಪಾತಕಿ ರವಿಪೂಜಾರಿ ಭಾರತದಲ್ಲಿ ಪರೋಕ್ಷವಾಗಿ ಅಪರಾಧ ಕೃತ್ಯ ನಡೆಸಿ ವಿದೇಶದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ</figcaption>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿತ್ತು. ಮಂಗಳೂರು ನಗರ, ಮುಲ್ಕಿ, ಮೂಡಬಿದರೆ, ಬರ್ಕೆ, ಕೋಣಾಚೆ, ಊರ್ವ, ಕಾವೂರು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳಿವೆ.</p>.<p>ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>