‘ಈಗಾಗಲೇ ಲಕ್ಷಾಂತರ ಟನ್ ಕಸ ವಿಲೇವಾರಿ ಮಾಡಿರುವುದರಿಂದ ಈ ಭಾಗದ ಕೆರೆಗಳ ನೀರು ಕಲುಷಿತಗೊಂಡು ಕೊಳವೆಬಾವಿಗಳಲ್ಲಿ ಕೊಳಚೆನೀರು ಹೊರಬರುತ್ತಿದೆ. ಕಸ ವಿಲೇವಾರಿ ಮಾಡುತ್ತಿರುವ ಜಾಗದ ಸಮೀಪದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ-ಕಾಲೇಜುಗಳೂ ಸೇರಿದಂತೆ ಹಲವಾರು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ನೌಕರರ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಬಿಬಿಎಂಪಿ ಕೂಡಲೇ ಕಸವಿಲೇವಾರಿ ಮಾಡುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.