ಬೆಂಗಳೂರು: ರಾಜ್ಯದ ಎಲ್ಲಾ ಸಣ್ಣ, ಅತೀ ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳು ಮತ್ತು ಗಾರ್ಮೆಂಟ್ ಕಾರ್ಖಾನೆಗಳನ್ನು ಮಾ.31ರವರೆಗೆ ಬಂದ್ ಮಾಡಲು ಕೈಗಾರಿಕೋದ್ಯಮಿಗಳ ನಿರ್ಧರಿಸಿದ್ದಾರೆ.
ಎಫ್ಕೆಸಿಸಿಐ, ಕಾಸಿಯಾ, ಪೀಣ್ಯ ಕೈಗಾರಿಕಾ ಸಂಘ ಮತ್ತು ಗಾರ್ಮೆಂಟ್ ಕಾರ್ಖಾನೆಗಳ ಸಂಘಗಳ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯದ 6 ಲಕ್ಷ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ 60 ಲಕ್ಷ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ನಿರ್ಧಾರ ಮಾಡಲಾಗಿದೆ.