ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಚೆನ್ನೈ ತಂಡ ಸಲ್ಲಿಸಿರುವ ‘ಬಿ’ ರಿಪೋರ್ಟ್ನಲ್ಲಿ, ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಹಾಗೂ ಪ್ರಸಾದ್ ಅವರ ಕೈವಾಡವೂ ಇದ್ದಂತಿಲ್ಲ ಎಂದೂ ಹೇಳಿದೆ. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೊದಲು ಗಣಪತಿ, ಜಾರ್ಜ್ ಹಾಗೂ ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದರು. ಆತ್ಮಹತ್ಯೆಗೆ ಮೊದಲು ಸ್ಥಳೀಯ ಟಿ.ವಿ ಚಾನಲ್ಗೆ ಸಂದರ್ಶನ ನೀಡಿದ್ದರು.