ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ ಕಾರ್ನಾಡ ಅವರ ನಿಧನದ ಹಿನ್ನೆಲೆಯಲ್ಲಿ ಶೋಮವಾರ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೆ,ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ.ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ವತಿಯಿಂದ ಟ್ವೀಟ್ ಮಾಡಲಾಗಿದೆ.
ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ #GirishKarnad ಗೌರವಾರ್ಥ ಸರ್ಕಾರಿ ಕಚೇರಿಗಳು,ಶಾಲೆ,ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು.ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ