ತುಮಕೂರು: ತುಮಕೂರು, ಗುಬ್ಬಿ ಮತ್ತು ಕುಣಿಗಲ್ ತಾಲ್ಲೂಕಿನ ಜನರನ್ನು ಬೆಚ್ಚಿ ಬೀಳಿಸಿರುವ ನರಹಂತಕ ಚಿರತೆ ಸೆರೆಗೆ ಅರಣ್ಯ ಇಲಾಖೆ 12 ಕಿಲೊಮೀಟರ್ ವ್ಯಾಪ್ತಿಯಲ್ಲಿ 21 ಬೋನುಗಳು ಹಾಗೂ 40 ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ಎರಡು ತಿಂಗಳು ಕಳೆದಿವೆ. ಆದರೆ, ಆ ಚಿರತೆ, ಮನುಷ್ಯರು ಮತ್ತು ಜಾನುವಾರುಗಳ ಮೇಲೆ ದಾಳಿ ಮುಂದುವರಿಸಿದೆ.