ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಿಜ್ವಾನ್‌ಗೆ ಟಿಕೆಟ್ ಕೊಡಬೇಡಿ’

Last Updated 5 ನವೆಂಬರ್ 2019, 20:22 IST
ಅಕ್ಷರ ಗಾತ್ರ

ಬೆಂಗಳೂರು: ಶಿವಾಜಿನಗರ ಕ್ಷೇತ್ರದ ಉಪಚುನಾವಣೆಯಲ್ಲಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡದಂತೆ ಈ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ. ರಿಜ್ವಾನ್ ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಲಾಗಿದೆ. ಈಗಾಗಲೇ ವಿಧಾನಪರಿಷತ್ ಸದಸ್ಯರಾಗಿದ್ದು, ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದು, ಈಗ ವಿಧಾನಸಭೆಗೆ ಟಿಕೆಟ್ ನೀಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.

ರಿಜ್ವಾನ್‌ಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂದು ಮನವಿಮಾಡಿದ್ದಾರೆ. ರಿಜ್ವಾನ್‌ಗೆ ಟಿಕೆಟ್ ನೀಡುವುದಕ್ಕೆ ಹಿರಿಯ ಮುಖಂಡರೂ ಸಹ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT