ಪಣಜಿ: ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದ್ವಂದ್ವ ನಿಲುವು ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಟೀಕಿಸಿದೆ.
‘ಈ ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವುದಾಗಿಮುಖ್ಯಮಂತ್ರಿ ತಿಳಿಸಿದ್ದಾರೆ. ಹಾಗಾದರೆ, ‘ಸೌಹಾರ್ದ ಇತ್ಯರ್ಥ’ ಏನು ಎನ್ನುವುದನ್ನು ಜನರಿಗೆ ವಿವರಿಸಬೇಕು’ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಆಗ್ರಹಿಸಿದ್ದಾರೆ.
‘ಕರ್ನಾಟಕದಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ ಗೋವಾ, ಕರ್ನಾಟಕ ಮತ್ತು ಕೇಂದ್ರ ಸರ್ಕಾರಗಳು ಮತದಾರರಿಗೆ ಸುಳ್ಳುಗಳನ್ನು ಹೇಳಿ ವಂಚಿಸುತ್ತಿವೆ’ ಎಂದು ಟೀಕಿಸಿದ್ದಾರೆ.