ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಆಡಳಿತಾಧಿಕಾರಿ ಕ್ರಮಕ್ಕೆ ತೀವೃ ಅತೃಪ್ತಿ ವ್ಯಕ್ತಪಡಿಸಿದ್ದ ನ್ಯಾಯಪೀಠ ದೇವಸ್ಥಾನದ ಆಡಳಿತಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿತ್ತು. ಅದರನ್ವಯ ಆಡಳಿತಾಧಿಕಾರಿ ಪ್ರಮಾಣ ಪತ್ರ ಸಲ್ಲಿಸಿದ್ದರು. ಪ್ರಮಾಣ ಪತ್ರದ ಸಂಗತಿಗಳು ಸತ್ಯಕ್ಕೆ ದೂರವಾಗಿವೆ ಎನ್ನುವ ಅಭಿಪ್ರಾಯವನ್ನು ವಿಚಾರಣೆ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದ ನ್ಯಾಯಪೀಠ, ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ಆದೇಶ ಪಾಲಿಸದ ದೇವಸ್ಥಾನದ ಆಡಳಿತ ಮಂಡಳಿವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನಾ ಪ್ರಕರಣ ಯಾಕೆ ದಾಖಲಿಸಬಾರದು ಎಂದು ಕಳೆದ ಮಾರ್ಚ್ 21ರ ವಿಚಾರಣೆ ಸಂದರ್ಭದಲ್ಲಿ ಮೌಖಿಕವಾಗಿ ಪ್ರಶ್ನಿಸಿ, ಆದೇಶ ಕಾಯ್ದಿರಿಸಿತ್ತು. ಇದೇ 22ರಂದು ಆದೇಶ ಪ್ರಕಟಿಸಿದ ನ್ಯಾಯಪೀಠ ಮೇಲ್ಮನವಿದಾರರ ವಿರುದ್ಧ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನಾ ಪ್ರಕರಣ ದಾಖಲಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ಗೆ ನಿರ್ದೇಶನ ನೀಡಿದೆ.