<p><strong>ಬೆಂಗಳೂರು: </strong>‘ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಬೇಕು’ ಎಂದು ಅಖಿಲ ಹವ್ಯಕ ಮಹಾಸಭಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ, ‘ದೇವಾಲಯದ ನಿರ್ವಹಣೆಯನ್ನು ಶ್ರೀಮಠವೇ ನಿರ್ವಹಿಸಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ಇದನ್ನು ಅಪವಾಖ್ಯಾನಗೊಳಿಸಿ ಸರ್ಕಾರ ಅಕ್ರಮವಾಗಿ ವಶಕ್ಕೆ ಪಡೆದಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸೆ.7ರಂದು ಇದ್ದ ಯಥಾಸ್ಥಿತಿಯನ್ನು ಮುಂದಿನ ಆದೇಶದವರೆಗೂ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಆದೇಶಿಸಿದೆ. ದೇವಾಲಯದ ಆಡಳಿತವು ಸೆ.19ರವರೆಗೂ ಮಠದ ನಿರ್ವಹಣೆಯಲ್ಲೇ ಇತ್ತು ಎಂಬುದು ಗಮನಾರ್ಹ. ಆದರೂ, ಕೆಲವು ವಿವೇಕಶೂನ್ಯರು ಅಪವ್ಯಾಖ್ಯಾನ ಮಾಡುತ್ತಿದ್ದಾರೆ. ಇದನ್ನು ಮಹಾಸಭಾ ಖಂಡಿಸುತ್ತದೆ’ ಎಂದು ತಿಳಿಸಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಆದೇಶವನ್ನು ಯಥಾವತ್ತಾಗಿ ಪಾಲಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನ್ಯಾಯಪೀಠದ ಆದೇಶಕ್ಕೆ ಅಗೌರವ ಸಲ್ಲಿಸದೇ, ಯಥೋಚಿತವಾಗಿ ಮಠಕ್ಕೆ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದೆ.</p>.<p class="Subhead"><strong>‘ಹೇಳಿಕೆ ಖಂಡನಾರ್ಹ’: </strong>‘ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರ ಹೇಳಿಕೆ ಖಂಡನೀಯ. ರಾಮಚಂದ್ರಾಪುರ ಮಠ, ರಾಘವೇಶ್ವರ ಭಾರತೀ ಶ್ರೀಗಳ ಬಗ್ಗೆ ಅಥವಾ ಸಮಾಜದ ಬಗ್ಗೆ ಮಾತನಾಡುವಾಗ ಅವರು ಜಾಗ್ರತೆ ವಹಿಸಬೇಕು’ ಎಂದೂ ಗಿರಿಧರ ಕಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಅವರ ಆಧಾರ ರಹಿತ ಹೇಳಿಕೆಗಳಿಂದ ಸಮಸ್ತ ಹವ್ಯಕ ಸಮಾಜಕ್ಕೆ ನೋವುಂಟಾಗಿದೆ. ಈ ರೀತಿಯ ಮಾತುಗಳನ್ನಾಡಿದರೆ ಅವರ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಬೇಕು’ ಎಂದು ಅಖಿಲ ಹವ್ಯಕ ಮಹಾಸಭಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.</p>.<p>ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಅಧ್ಯಕ್ಷ ಡಾ.ಗಿರಿಧರ ಕಜೆ, ‘ದೇವಾಲಯದ ನಿರ್ವಹಣೆಯನ್ನು ಶ್ರೀಮಠವೇ ನಿರ್ವಹಿಸಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಆದರೆ, ಇದನ್ನು ಅಪವಾಖ್ಯಾನಗೊಳಿಸಿ ಸರ್ಕಾರ ಅಕ್ರಮವಾಗಿ ವಶಕ್ಕೆ ಪಡೆದಿದೆ’ ಎಂದು ಅವರು ಆರೋಪಿಸಿದ್ದಾರೆ.</p>.<p>‘ಸೆ.7ರಂದು ಇದ್ದ ಯಥಾಸ್ಥಿತಿಯನ್ನು ಮುಂದಿನ ಆದೇಶದವರೆಗೂ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಆದೇಶಿಸಿದೆ. ದೇವಾಲಯದ ಆಡಳಿತವು ಸೆ.19ರವರೆಗೂ ಮಠದ ನಿರ್ವಹಣೆಯಲ್ಲೇ ಇತ್ತು ಎಂಬುದು ಗಮನಾರ್ಹ. ಆದರೂ, ಕೆಲವು ವಿವೇಕಶೂನ್ಯರು ಅಪವ್ಯಾಖ್ಯಾನ ಮಾಡುತ್ತಿದ್ದಾರೆ. ಇದನ್ನು ಮಹಾಸಭಾ ಖಂಡಿಸುತ್ತದೆ’ ಎಂದು ತಿಳಿಸಿದ್ದಾರೆ.</p>.<p>‘ಸುಪ್ರೀಂ ಕೋರ್ಟ್ ಆದೇಶವನ್ನು ಯಥಾವತ್ತಾಗಿ ಪಾಲಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನ್ಯಾಯಪೀಠದ ಆದೇಶಕ್ಕೆ ಅಗೌರವ ಸಲ್ಲಿಸದೇ, ಯಥೋಚಿತವಾಗಿ ಮಠಕ್ಕೆ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದೆ.</p>.<p class="Subhead"><strong>‘ಹೇಳಿಕೆ ಖಂಡನಾರ್ಹ’: </strong>‘ಹಿರಿಯ ವಕೀಲ ಎಸ್.ಎಸ್.ನಾಗಾನಂದ ಅವರ ಹೇಳಿಕೆ ಖಂಡನೀಯ. ರಾಮಚಂದ್ರಾಪುರ ಮಠ, ರಾಘವೇಶ್ವರ ಭಾರತೀ ಶ್ರೀಗಳ ಬಗ್ಗೆ ಅಥವಾ ಸಮಾಜದ ಬಗ್ಗೆ ಮಾತನಾಡುವಾಗ ಅವರು ಜಾಗ್ರತೆ ವಹಿಸಬೇಕು’ ಎಂದೂ ಗಿರಿಧರ ಕಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಅವರ ಆಧಾರ ರಹಿತ ಹೇಳಿಕೆಗಳಿಂದ ಸಮಸ್ತ ಹವ್ಯಕ ಸಮಾಜಕ್ಕೆ ನೋವುಂಟಾಗಿದೆ. ಈ ರೀತಿಯ ಮಾತುಗಳನ್ನಾಡಿದರೆ ಅವರ ವಿರುದ್ಧ ಹೋರಾಟ ಅನಿವಾರ್ಯವಾಗಲಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>