ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಕೇಶ್ವಾಪುರ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ, ರೈಲು ನಿಲ್ದಾಣ, ಶಿರೂರು ಪಾರ್ಕ್ ಸರ್ಕಲ್ ಮತ್ತು ಕಿಮ್ಸ್ ಮುಂಭಾಗದ ರಸ್ತೆ ಸೇರಿದಂತೆ ಹಲವು ಮುಖ್ಯ ರಸ್ತೆಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸರು ಅಲ್ಲಲ್ಲಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರರನ್ನು ತಡೆದು, ವಿಚಾರಿಸಿ ಅಗತ್ಯ ಕೆಲಸವಿದ್ದವರಿಗಷ್ಟೇ ಬಿಡುತ್ತಿದ್ದ ಚಿತ್ರಣ ಕಂಡು ಬಂತು.