ಎರಡು ವರ್ಷದ ಹಿಂದೆ ಕಾರಣಿಕ ಗೊರವಯ್ಯನಾಗಿ ನೇಮಕವಾಗಿದ್ದ ರಾಮಣ್ಣನ ಬದಲಿಗೆ ಕಾರಣಿಕ ವಂಶಸ್ಥರಲ್ಲಿಯೇ ಒಬ್ಬರಾದ ಸಣ್ಣಪ್ಪನನ್ನು ನೇಮಿಸಲಾಗಿದೆ. ಗುರುವಾರ ಬೆಳಿಗ್ಗೆ ಕಪಿಲಮುನಿ ಪೀಠದ ಎದುರು ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರು ಧಾರ್ಮಿಕ ವಿಧಿ ಪ್ರಕಾರ ಸಣ್ಣಪ್ಪನಿಗೆ ಗೊರವ ದೀಕ್ಷೆ ನೀಡಿದರು. ಅದನ್ನು ಕುರುಬ ಸಮಾಜದ ಮುಖಂಡರು ವಿರೋಧಿಸಿ, ರಾಮಣ್ಣನನ್ನೇ ಮುಂದುವರಿಸಲು ಪಟ್ಟು ಹಿಡಿದರು.