‘ಸಿದ್ದರಾಮಯ್ಯ ಸಿಎಎ ವಿರೋಧಿ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಬಂದಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರಿ ಅತಿಥಿಗೃಹ, ಸರ್ಕಾರಿ ಕಾರು ಕೊಡಬೇಡಿ ಎಂದು ಮುಖ್ಯಮಂತ್ರಿ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಸಂದೇಶ ರವಾನೆಯಾಗಿತ್ತು. ಹೀಗಾಗಿ, ಕಾರು, ಕೊಠಡಿ ಕೊಡದೇ ಅಪಮಾನಿಸಲಾಗಿದೆ. ಇದನ್ನು ಅಧಿವೇಶನದಲ್ಲಿ ಪ್ರಶ್ನಿಸುತ್ತೇವೆ’ ಎಂದು ಅವರು ಹೇಳಿದರು.