ಬೆಂಗಳೂರು: ಮಳೆ ಮತ್ತು ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ ಸರ್ಕಾರ ಗುರುವಾರ ಪರಿಹಾರ ಘೋಷಿಸಿದೆ.
ವಿಧಾನ ಪರಿಷತ್ನಲ್ಲಿ ಈ ಕುರಿತು ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಕಂದಾಯ ಸಚಿವ ಆರ್.ಅಶೋಕ್,ಶೇ 25ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದರೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
ಶೇ 15ರಿಂದ 25ರಷ್ಟುಹಾನಿಯಾಗಿದ್ದರೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಕಟಿಸಿದರು.
ಮಳೆ ಮತ್ತು ನೆರೆಯಿಂದಾಗಿಶೇ 25ರಿಂದ ಶೇ 75ರಷ್ಟುಪ್ರಮಾಣದಲ್ಲಿ ಮನೆಗಳು ಹಾಳಾಗಿದ್ದರೆ₹1 ಲಕ್ಷ ಪರಿಹಾರ ನೀಡುವುದಾಗಿ ಸರ್ಕಾರ ಈ ಹಿಂದೆ ತಿಳಿಸಿತ್ತು.