<p><strong>ಬೆಂಗಳೂರು:</strong> ‘ಇದೊಂದು ಪುಕ್ಕಲು ರಾಜ್ಯ ಸರ್ಕಾರ. ಜನಶಕ್ತಿಗೆ ಹೆದರಿ ನಿಷೇಧಾಜ್ಞೆ ಜಾರಿ ಮಾಡಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ರಾಜ್ಯದ ಹಲೆವೆಡೆ ನಿಷೇಧಾಜ್ಞೆ ಜಾರಿ ಮಾಡಿದ್ದು, ಇದನ್ನು ವಿರೋಧಿಸಿ ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಅಸ್ತ್ರವನ್ನು ಬಳಸುತ್ತಿದ್ದಾರೆ. ದಮನಿಸಿದಷ್ಟು ಜನಾಕ್ರೋಶ ಪುಟಿದೆದ್ದು ಬರುತ್ತದೆ ಎನ್ನುವುದನ್ನು ಯಡಿಯೂರಪ್ಪ ಅವರು ತಿಳಿಯಲಿ’ ಎಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸಂವಿಧಾನದ ಮೌಲ್ಯಗಳ ಕಗ್ಗೊಲೆ ಆಗುತ್ತಿದೆ. ಸೆಕ್ಷನ್ 144 ಜಾರಿ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಇದನ್ನು ನಾನು ಎಂದೂ ನಿರೀಕ್ಷಿಸಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ನಿಮಗಿಂತ ಅವರೇ ಎಷ್ಟೋ ಉತ್ತಮ. ನಾಚಿಕೆಯಾಗಬೇಕು ನಿಮಗೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇದೊಂದು ಪುಕ್ಕಲು ರಾಜ್ಯ ಸರ್ಕಾರ. ಜನಶಕ್ತಿಗೆ ಹೆದರಿ ನಿಷೇಧಾಜ್ಞೆ ಜಾರಿ ಮಾಡಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕಿಸಿದ್ದಾರೆ.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ರಾಜ್ಯದ ಹಲೆವೆಡೆ ನಿಷೇಧಾಜ್ಞೆ ಜಾರಿ ಮಾಡಿದ್ದು, ಇದನ್ನು ವಿರೋಧಿಸಿ ಅವರು ಟ್ವೀಟ್ ಮಾಡಿದ್ದಾರೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಅಸ್ತ್ರವನ್ನು ಬಳಸುತ್ತಿದ್ದಾರೆ. ದಮನಿಸಿದಷ್ಟು ಜನಾಕ್ರೋಶ ಪುಟಿದೆದ್ದು ಬರುತ್ತದೆ ಎನ್ನುವುದನ್ನು ಯಡಿಯೂರಪ್ಪ ಅವರು ತಿಳಿಯಲಿ’ ಎಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಸಂವಿಧಾನದ ಮೌಲ್ಯಗಳ ಕಗ್ಗೊಲೆ ಆಗುತ್ತಿದೆ. ಸೆಕ್ಷನ್ 144 ಜಾರಿ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಇದನ್ನು ನಾನು ಎಂದೂ ನಿರೀಕ್ಷಿಸಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>‘ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ನಿಮಗಿಂತ ಅವರೇ ಎಷ್ಟೋ ಉತ್ತಮ. ನಾಚಿಕೆಯಾಗಬೇಕು ನಿಮಗೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>