ಬೆಂಗಳೂರು: ‘ಇದೊಂದು ಪುಕ್ಕಲು ರಾಜ್ಯ ಸರ್ಕಾರ. ಜನಶಕ್ತಿಗೆ ಹೆದರಿ ನಿಷೇಧಾಜ್ಞೆ ಜಾರಿ ಮಾಡಿದೆ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಕಾರಣ ರಾಜ್ಯದ ಹಲೆವೆಡೆ ನಿಷೇಧಾಜ್ಞೆ ಜಾರಿ ಮಾಡಿದ್ದು, ಇದನ್ನು ವಿರೋಧಿಸಿ ಅವರು ಟ್ವೀಟ್ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಹೇರಿರುವ ಪುಕ್ಕಲು ರಾಜ್ಯ ಸರ್ಕಾರ ಜನಶಕ್ತಿಗೆ ಹೆದರಿದೆ.
‘ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದಿರುವ ಪ್ರತಿರೋಧವನ್ನು ದಮನಿಸಲು ನಿಷೇಧಾಜ್ಞೆ ಅಸ್ತ್ರವನ್ನು ಬಳಸುತ್ತಿದ್ದಾರೆ. ದಮನಿಸಿದಷ್ಟು ಜನಾಕ್ರೋಶ ಪುಟಿದೆದ್ದು ಬರುತ್ತದೆ ಎನ್ನುವುದನ್ನು ಯಡಿಯೂರಪ್ಪ ಅವರು ತಿಳಿಯಲಿ’ ಎಂದು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಸಂವಿಧಾನದ ಮೌಲ್ಯಗಳ ಕಗ್ಗೊಲೆ ಆಗುತ್ತಿದೆ. ಸೆಕ್ಷನ್ 144 ಜಾರಿ ಮಾಡುವ ಮೂಲಕ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದಾರೆ. ಇದನ್ನು ನಾನು ಎಂದೂ ನಿರೀಕ್ಷಿಸಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
After series of assault on the values enshrined in the Constitution, it is time to take away the Right to Peaceful Protest through Sec144
I never expected @bsybjp to play to the tune of @narendramodi. I thought he was more progressive & inclusive.