ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ಕುಮಾರ್, ‘ಸರ್ಕಾರದ ಮಾರ್ಗಸೂಚಿ ಅನ್ವಯ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳನ್ನು ಒಂದು ಘಟಕವಾಗಿ ಪರಿಗಣಿಸಲಾಗಿದೆ. ಅದೇ ರೀತಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೂ ಒಂದೇ ಘಟಕವಾಗಿ ಪರಿಗಣಿಸಿ ಹಗಲು ವೇಳೆಯಲ್ಲಿ (ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ) ಆರ್ಥಿಕ ಚಟುವಟಿಕೆಗೆ ಅವಕಾಶ ನೀಡಲಾಗಿದೆ’ ಎಂದಿದ್ದಾರೆ.