ಕೇಂದ್ರ ಗೃಹ ಸಚಿವಾಲಯಆದೇಶದ ಮೇರೆಗೆ ಲಾಕ್ಡೌನ್ನಿಂದಾಗಿಹಲವೆಡೆ ಅತಂತ್ರ ಸ್ಥಿತಿಯಲ್ಲಿ ಸಿಲುಕರುವವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ಇತರ ವ್ಯಕ್ತಿಗಳು ಕಾಲ್ನಡಿಗೆಯಲ್ಲಿ ಸಂಚರಿಸುವುದು ಕಂಡಲ್ಲಿ ಅವರನ್ನು ಅವರ ಸ್ವಂತ ಸ್ಥಳಗಳಿಗೆತಲುಪಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರೆ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಸೇರಿದಂತೆ ಸರ್ಕಾರದ ಅಧೀನದಲ್ಲಿರುವ ಎಲ್ಲಾಸಾರಿಗೆ ಸಂಸ್ಥೆಗಳಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಆದೇಶಿಸಿದ್ದಾರೆ.