ಬೆಂಗಳೂರು: ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ತಂದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯಪತ್ರದಲ್ಲಿ ಶನಿವಾರ ಪ್ರಕಟಿಸಲಾಗಿದೆ.
ಈ ತಿದ್ದುಪಡಿ ಮೂಲಕ ಮಾರುಕಟ್ಟೆ ಪ್ರಾಂಗಣಗಳಲ್ಲಿ, ಉಪ ಪ್ರಾಂಗಣಗಳಲ್ಲಿ ಮತ್ತು ಉಪ ಮಾರುಕಟ್ಟೆ ಪ್ರಾಂಗಣಗಳಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟವನ್ನು ಮಾರುಕಟ್ಟೆ ಸಮಿತಿ ನಿಯಂತ್ರಿಸಲು ಅವಕಾಶ ಆಗಿದೆ.
ಅಲ್ಲದೆ, ರಾಜ್ಯದಲ್ಲಿ ಖಾಸಗಿ ವ್ಯಕ್ತಿ ಅಥವಾ ಕಂಪನಿಗಳು ಕೃಷಿ ಮಾರುಕಟ್ಟೆ ಆರಂಭಿಸಲು ಮತ್ತು ರೈತರು ತಮಗೆ ಇಷ್ಟ ಬಂದವರಿಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೂಡಾ ಮುಕ್ತ ಅವಕಾಶ ಕಲ್ಪಿಸಿದೆ.