‘ಯಡಿಯೂರಪ್ಪ ಅವರು ತಂತಿ ಮೇಲಿನ ನಡಿಗೆಯಲ್ಲೇ ಸಾಗುವುದು ಅನಿವಾರ್ಯ. ಜೆಡಿಎಸ್ ಸೇರಿ ಎಲ್ಲಾ ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ, ಸೈದ್ಧಾಂತಿಕ ಬದ್ಧತೆ ಮರೆತು ಕಂಡಕಂಡವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಿವೆ. ಅನ್ಯ ಮಾರ್ಗದಿಂದ ಆರಿಸಿ ಬಂದ ಶಾಸಕ
ರಿಂದ ನೈತಿಕತೆ ನಿರೀಕ್ಷಿಸಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.ಬಿಜೆಪಿಗೆ ಬಾಹ್ಯ ಬೆಂಬಲ ನೀಡುವುದು ಸೂಕ್ತ ಎಂಬ ಜಿ.ಟಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಈ ಹಿಂದೆ ಒಮ್ಮೆ ನಮ್ಮ ಪಕ್ಷ ಬಿಜೆಪಿಗೆ ಬೆಂಬಲ ನೀಡಿದ್ದರಿಂದಲೇ ದಕ್ಷಿಣ ಭಾರತದ ಹೆಬ್ಬಾಗಿಲು ಆ ಪಕ್ಷಕ್ಕೆ ತೆರೆದುಕೊಂಡಿದೆ. ಇಂತಹ ಪ್ರಮಾದವನ್ನು ಮತ್ತೆ ಮಾಡುವುದು ಸೂಕ್ತವಲ್ಲ’ ಎಂದರು.