ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷ ಸೂಚಿಸಿದರೆ ಇಲ್ಲಿಂದಲೇ ಕಾರು ವಾಪಸು ಕಳಿಸಿ, ಬಸ್ಸಿನಲ್ಲಿ ತೆರಳುವೆ: ಕಾರಜೋಳ

Last Updated 28 ಜನವರಿ 2020, 8:58 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಇಲ್ಲಿಂದಲೇ ಕಾರು ವಾಪಸು ಕಳಿಸಿ, ಬಸ್ಸಿನಲ್ಲಿ ತೆರಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಿಯೇ ಆಗುತ್ತದೆ. ಪಕ್ಷದ ನಿಲುವಿಗೆ ಬದ್ಧರಾಗಿರುತ್ತೇವೆ. ರಾಜಕಾರಣಿಗೆ ಪಕ್ಷ ತಾಯಿ ಇದ್ದಂತೆ. ಪಕ್ಷದ ನಿರ್ಣಯ ಗೌರವಿಸದಿದ್ದರೆ ಬೆಳೆಯಲು ಸಾಧ್ಯ ಇಲ್ಲ’ ಎಂದು ಉತ್ತರಿಸಿದರು.

‘ಕೆಲವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುತ್ತೇನೆಂದು ಹೇಳಿದ್ದಾರೆ. ಮತ್ತೆ ಕೆಲವರು ಆ ಸ್ಥಾನ ಕೊಡಿ ಎಂದು ಕೋರಿಕೆ ಇಟ್ಟಿದ್ದಾರೆ. ಇವೆಲ್ಲ ಸಾಮಾನ್ಯ’ ಎಂದರು.

‘ಸಚಿವ ಸ್ಥಾನಕ್ಕಾಗಿ ಜಾತಿ ಆಧಾರದಲ್ಲಿ ಒತ್ತಡಗಳು ಹೆಚ್ಚಾಗಬಾರದು. ಪಕ್ಷಕ್ಕಾಗಿ ದುಡಿದವರು, ಪ್ರಾದೇಶಿಕ, ಜಿಲ್ಲಾವಾರು ಪ್ರಾತಿನಿಧ್ಯ ಮುಂದಿಟ್ಟುಕೊಂಡು ನಿರ್ಣಯ ಮಾಡಬೇಕು. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.

‘ಹೈಕಮಾಂಡ್‌ ಸ್ವಾತಂತ್ರ್ಯ ನೀಡದಿದ್ದರೆ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೇ? ಅವರಿಗೆ ಪೂರ್ಣ ಸ್ವಾತಂತ್ರ್ಯ, ಅಧಿಕಾರ ಇದೆ. ಹೈಕಮಾಂಡ್‌ ಜತೆ ಚರ್ಚಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು.

‘ಅತಿವೃಷ್ಟಿಯಿಂದ ಮೂಡಿಗೆರೆ ಭಾಗದಲ್ಲಿ ಕೊಚ್ಚಿ ಹೋಗಿರುವ ಸೇತುವೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸೇತುವೆಗಳ ಕಾಮಗಾರಿ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಕೋರಿಕೆ ಸಲ್ಲಿಸಲು ತಿಳಿಸಿದ್ದೇನೆ’ ಎಂದು ಉತ್ತರಿಸಿದರು.

‘ಮಲೆನಾಡು ಭಾಗದಲ್ಲಿ ಹೆಚ್ಚು ಹಾನಿಯಾಗಿರುವ ಮಾಹಿತಿ ಇದೆ. ಮೂಡಿಗೆರೆ, ಶೃಂಗೇರಿ, ಚಿಕ್ಕಮಗಳೂರು ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಒದಗಿಸಲು ಆದ್ಯತೆ ನೀಡುತ್ತೇನೆ’ ಎಂದರು.

‘ಕಸ್ತೂರಿ ರಂಗನ್‌ ವರದಿ ಜಾರಿ ನಿಟ್ಟಿನಲ್ಲಿ ಅನೇಕ ಬಾರಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತಾರೆ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ನಿಟ್ಟಿನಲ್ಲಿ ಸ್ವಲ್ಪ ದಿನ ಕಾಯುಬೇಕಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT