<p><strong>ಚಿಕ್ಕಮಗಳೂರು:</strong> ‘ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಇಲ್ಲಿಂದಲೇ ಕಾರು ವಾಪಸು ಕಳಿಸಿ, ಬಸ್ಸಿನಲ್ಲಿ ತೆರಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಿಯೇ ಆಗುತ್ತದೆ. ಪಕ್ಷದ ನಿಲುವಿಗೆ ಬದ್ಧರಾಗಿರುತ್ತೇವೆ. ರಾಜಕಾರಣಿಗೆ ಪಕ್ಷ ತಾಯಿ ಇದ್ದಂತೆ. ಪಕ್ಷದ ನಿರ್ಣಯ ಗೌರವಿಸದಿದ್ದರೆ ಬೆಳೆಯಲು ಸಾಧ್ಯ ಇಲ್ಲ’ ಎಂದು ಉತ್ತರಿಸಿದರು.</p>.<p>‘ಕೆಲವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುತ್ತೇನೆಂದು ಹೇಳಿದ್ದಾರೆ. ಮತ್ತೆ ಕೆಲವರು ಆ ಸ್ಥಾನ ಕೊಡಿ ಎಂದು ಕೋರಿಕೆ ಇಟ್ಟಿದ್ದಾರೆ. ಇವೆಲ್ಲ ಸಾಮಾನ್ಯ’ ಎಂದರು.</p>.<p>‘ಸಚಿವ ಸ್ಥಾನಕ್ಕಾಗಿ ಜಾತಿ ಆಧಾರದಲ್ಲಿ ಒತ್ತಡಗಳು ಹೆಚ್ಚಾಗಬಾರದು. ಪಕ್ಷಕ್ಕಾಗಿ ದುಡಿದವರು, ಪ್ರಾದೇಶಿಕ, ಜಿಲ್ಲಾವಾರು ಪ್ರಾತಿನಿಧ್ಯ ಮುಂದಿಟ್ಟುಕೊಂಡು ನಿರ್ಣಯ ಮಾಡಬೇಕು. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.</p>.<p>‘ಹೈಕಮಾಂಡ್ ಸ್ವಾತಂತ್ರ್ಯ ನೀಡದಿದ್ದರೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೇ? ಅವರಿಗೆ ಪೂರ್ಣ ಸ್ವಾತಂತ್ರ್ಯ, ಅಧಿಕಾರ ಇದೆ. ಹೈಕಮಾಂಡ್ ಜತೆ ಚರ್ಚಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು.</p>.<p>‘ಅತಿವೃಷ್ಟಿಯಿಂದ ಮೂಡಿಗೆರೆ ಭಾಗದಲ್ಲಿ ಕೊಚ್ಚಿ ಹೋಗಿರುವ ಸೇತುವೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸೇತುವೆಗಳ ಕಾಮಗಾರಿ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೋರಿಕೆ ಸಲ್ಲಿಸಲು ತಿಳಿಸಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಮಲೆನಾಡು ಭಾಗದಲ್ಲಿ ಹೆಚ್ಚು ಹಾನಿಯಾಗಿರುವ ಮಾಹಿತಿ ಇದೆ. ಮೂಡಿಗೆರೆ, ಶೃಂಗೇರಿ, ಚಿಕ್ಕಮಗಳೂರು ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚು ಅನುದಾನ ಒದಗಿಸಲು ಆದ್ಯತೆ ನೀಡುತ್ತೇನೆ’ ಎಂದರು.</p>.<p>‘ಕಸ್ತೂರಿ ರಂಗನ್ ವರದಿ ಜಾರಿ ನಿಟ್ಟಿನಲ್ಲಿ ಅನೇಕ ಬಾರಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತಾರೆ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ನಿಟ್ಟಿನಲ್ಲಿ ಸ್ವಲ್ಪ ದಿನ ಕಾಯುಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಇಲ್ಲಿಂದಲೇ ಕಾರು ವಾಪಸು ಕಳಿಸಿ, ಬಸ್ಸಿನಲ್ಲಿ ತೆರಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಪ್ರತಿಕ್ರಿಯಿಸಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಿಯೇ ಆಗುತ್ತದೆ. ಪಕ್ಷದ ನಿಲುವಿಗೆ ಬದ್ಧರಾಗಿರುತ್ತೇವೆ. ರಾಜಕಾರಣಿಗೆ ಪಕ್ಷ ತಾಯಿ ಇದ್ದಂತೆ. ಪಕ್ಷದ ನಿರ್ಣಯ ಗೌರವಿಸದಿದ್ದರೆ ಬೆಳೆಯಲು ಸಾಧ್ಯ ಇಲ್ಲ’ ಎಂದು ಉತ್ತರಿಸಿದರು.</p>.<p>‘ಕೆಲವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುತ್ತೇನೆಂದು ಹೇಳಿದ್ದಾರೆ. ಮತ್ತೆ ಕೆಲವರು ಆ ಸ್ಥಾನ ಕೊಡಿ ಎಂದು ಕೋರಿಕೆ ಇಟ್ಟಿದ್ದಾರೆ. ಇವೆಲ್ಲ ಸಾಮಾನ್ಯ’ ಎಂದರು.</p>.<p>‘ಸಚಿವ ಸ್ಥಾನಕ್ಕಾಗಿ ಜಾತಿ ಆಧಾರದಲ್ಲಿ ಒತ್ತಡಗಳು ಹೆಚ್ಚಾಗಬಾರದು. ಪಕ್ಷಕ್ಕಾಗಿ ದುಡಿದವರು, ಪ್ರಾದೇಶಿಕ, ಜಿಲ್ಲಾವಾರು ಪ್ರಾತಿನಿಧ್ಯ ಮುಂದಿಟ್ಟುಕೊಂಡು ನಿರ್ಣಯ ಮಾಡಬೇಕು. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಹೇಳಿದರು.</p>.<p>‘ಹೈಕಮಾಂಡ್ ಸ್ವಾತಂತ್ರ್ಯ ನೀಡದಿದ್ದರೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿತ್ತೇ? ಅವರಿಗೆ ಪೂರ್ಣ ಸ್ವಾತಂತ್ರ್ಯ, ಅಧಿಕಾರ ಇದೆ. ಹೈಕಮಾಂಡ್ ಜತೆ ಚರ್ಚಿಸಿ ಅವರು ನಿರ್ಧಾರ ಕೈಗೊಳ್ಳುತ್ತಾರೆ’ ಎಂದರು.</p>.<p>‘ಅತಿವೃಷ್ಟಿಯಿಂದ ಮೂಡಿಗೆರೆ ಭಾಗದಲ್ಲಿ ಕೊಚ್ಚಿ ಹೋಗಿರುವ ಸೇತುವೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸೇತುವೆಗಳ ಕಾಮಗಾರಿ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೋರಿಕೆ ಸಲ್ಲಿಸಲು ತಿಳಿಸಿದ್ದೇನೆ’ ಎಂದು ಉತ್ತರಿಸಿದರು.</p>.<p>‘ಮಲೆನಾಡು ಭಾಗದಲ್ಲಿ ಹೆಚ್ಚು ಹಾನಿಯಾಗಿರುವ ಮಾಹಿತಿ ಇದೆ. ಮೂಡಿಗೆರೆ, ಶೃಂಗೇರಿ, ಚಿಕ್ಕಮಗಳೂರು ಕ್ಷೇತ್ರಗಳಿಗೆ ಬಜೆಟ್ನಲ್ಲಿ ಹೆಚ್ಚು ಅನುದಾನ ಒದಗಿಸಲು ಆದ್ಯತೆ ನೀಡುತ್ತೇನೆ’ ಎಂದರು.</p>.<p>‘ಕಸ್ತೂರಿ ರಂಗನ್ ವರದಿ ಜಾರಿ ನಿಟ್ಟಿನಲ್ಲಿ ಅನೇಕ ಬಾರಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಸಭೆ ನಡೆಸಿ ನಿರ್ಣಯ ಕೈಗೊಳ್ಳುತ್ತಾರೆ. ಎ.ಜೆ.ಸದಾಶಿವ ಆಯೋಗದ ವರದಿ ಜಾರಿ ನಿಟ್ಟಿನಲ್ಲಿ ಸ್ವಲ್ಪ ದಿನ ಕಾಯುಬೇಕಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>