ಸೋಂಕು ಹರಡದಂತೆ ತಡೆಯಲು ಜನರು ಮನೆಯಲ್ಲೇ ಉಳಿಯುವುದು ಅಗತ್ಯ. ಈ ಕಾರಣದಿಂದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಾಲ್ಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸೋಂಕು ನಿಯಂತ್ರಿಸಲು ಸಾಕಷ್ಟು ಅನುಕೂಲವಾಗಿದೆ. ಅಗತ್ಯ ಎನಿಸಿದರೆ ರಜೆ ಮತ್ತು ಬಂದ್ ಮುಂದುವರಿಸಲಾಗುವುದು. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ಈ ಕುರಿತು ತೀರ್ಮಾನಕ್ಕೆ ಬರಲಾಗುವುದು ಎಂದರು.